One Tap News - Kannada News Daily

Header
collapse
...
Home / Kodagu / ತಿತಿಮತಿಯಲ್ಲಿ ಕಾಡಾನೆ ದಾಳಿ : ಆಸ್ಪತ್ರೆಗೆ ತೆರಳಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಮಾನ್ಯ ಶಾಸಕರಾದ ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು

ತಿತಿಮತಿಯಲ್ಲಿ ಕಾಡಾನೆ ದಾಳಿ : ಆಸ್ಪತ್ರೆಗೆ ತೆರಳಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಮಾನ್ಯ ಶಾಸಕರಾದ ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು

2026-06-05  Kodagu Desk  11 views
ತಿತಿಮತಿಯಲ್ಲಿ ಕಾಡಾನೆ ದಾಳಿ : ಆಸ್ಪತ್ರೆಗೆ ತೆರಳಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಮಾನ್ಯ ಶಾಸಕರಾದ ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು

ಪೊನ್ನಂಪೇಟೆ. 

    ತಿತಿಮತಿ ಬಳಿಯ ಕೋಣನಕಟ್ಟೆಯಲ್ಲಿ ತಮ್ಮ ಕಾಫಿ ತೋಟ ವೀಕ್ಷಿಸಲು ಹೋಗಿದ್ದಾಗ, ಅಣ್ಣಳಮಾಡ ಸುನಿಲ್ ಅಚ್ಚಯ್ಯ ಅವರ ಪತ್ನಿ ಸಂಧ್ಯಾ ಎಂಬುವರ ಮೇಲೆ ಹಾಗೂ ಇತರ ನಾಲ್ಕು ಮಂದಿಯ ಮೇಲೆ ಕಾಡಾನೆ ಅಚಾನಕ್ ದಾಳಿ ನಡೆಸಿದೆ.

 ಆನೆ ದಾಳಿಗೆ ಒಳಗಾಗಿ ಗಾಯಗೊಂಡವರನ್ನು ಲೋಪಾಮುದ್ರ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ, ಸಂಧ್ಯಾ ಅವರು ದಾಳಿಯ ತೀವ್ರತೆಯಿಂದ ಮೃತಪಟ್ಟರು.

1002501225.jpg

   ಆಸ್ಪತ್ರೆಯಲ್ಲಿದ್ದ ಅರಣ್ಯ ಹಾಗೂ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸಿದ ಮಾನ್ಯ ಶಾಸಕರು, ಕೂಡಲೇ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಈ ಸಂದರ್ಭದಲ್ಲಿ ಪೊನ್ನಂಪೇಟೆ ಬ್ಲಾಕ್ ಅಧ್ಯಕ್ಷರು ಮಿದೇರಿರ ನವೀನ್, ತಾಲೂಕು ಬಗರ್ ಹುಕುಂ ಅಧ್ಯಕ್ಷರು ಅಣ್ಣಳ್ಳಮಾಡ ಲಾಲಾ ಅಪ್ಪಣ್ಣ,  ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷರು ಆಲಿರ ರಶೀದ್, ಪ್ರಮುಖರು ಸೂರಜ್ ಹೊಸೂರು, ರಾಜು, ಹಾಗೂ ಪ್ರಮುಖರು ಉಪಸ್ಥಿತರಿದ್ದರು.


Share: