ವಿರಾಜಪೇಟೆ.
ನವೆಂಬರ್ 6 ರಿಂದ 9 ರವರೆಗೆ ನಡೆಯಲಿರುವ ಕೊಡವ ನಮ್ಮೆ
ಕೊಡವ ಸಮಾಜ ಒಕ್ಕೂಟದಿಂದ ನಾಳೆ ಬೆಳಿಗ್ಗೆ 8.30 ಗಂಟೆಗೆ ಬಾಳುಗೋಡು ಹಾಕಿ ಮೈದಾನದ ಸಮೀಪವಿರುವ ಚಾಮುಂಡೇಶ್ವರಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ನಂತರ ಸುಸಜ್ಜಿತಗೊಂಡಿರುವ ಹಾಕಿ ಮೈದಾನದಲ್ಲಿ ಚಾಲನೆ ದೊರೆಯಲಿದೆ.
ಮುಖ್ಯ ಅತಿಥಿಗಳಾಗಿ ಮೈಸೂರು -ಕೊಡಗು ಸಂಸದರಾದ ಯದುವೀರ್ ಒಡೆಯರ್ , ಮುಖ್ಯಮಂತ್ರಿ ಕಾನೂನು ಸಲಹೆಗಾರರು ಮತ್ತು ವಿರಾಜಪೇಟೆ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟೀರ ಎಸ್. ಪೊನ್ನಣ್ಣ, ಕರ್ನಾಟಕ ಕ್ರೀಡಾ ಪ್ರಾಧಿಕಾರ ಉಪಾಧ್ಯಕ್ಷರಾದ ಚೆಪ್ಪುಡೀರ ಅರುಣ್ ಮಾಚಯ್ಯ ಹಾಗೂ ಮಾಜಿ ಸಚಿವ ಎಂ.ಸಿ ನಾಣಯ್ಯ , ಬಾಳುಗೋಡುವಿನ ಕೊಡವ ಸಮಾಜಗಳ ಒಕ್ಕೂಟ ದ ಹಿಂದಿನ ಅಧ್ಯಕ್ಷರಾದ ಬೆಳ್ಳಿಯ್ಯಪ್ಪ, ಎಲ್ಲಾ ಕೊಡವ ಸಮಾಜಗಳ ಅಧ್ಯಕ್ಷರು ಪದಾಧಿಕಾರಿಗಳು, ಬಾಳುಗೋಡು ಫೆಡರೇಶನ್ ಕೊಡವ ಸಮಾಜದ ಮಹಿಳಾ ವಿಂಗ್ಸ್ ಅಧ್ಯಕ್ಷರು ಮತ್ತು ಸದಸ್ಯರು ಸೇರಿದಂತೆ ಪ್ರಮುಖರು ಭಾಗಿಯಾಗಲಿದ್ದಾರೆ ಎಂದು ಕೊಡವ ಸಮಾಜಗಳ ಒಕ್ಕೂಟದ ಅಧ್ಯಕ್ಷ ಕಳ್ಳಿಚಂಡ ವಿಷ್ಣು ಕಾರ್ಯಪ್ಪ ಮಾಹಿತಿ ನೀಡಿದರು.